9:33 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಸಂಪರ್ಕಿಸುವ ದೇವರಗುಡ್ಡೆ ಸಮೀಪ ಗುಡ್ಡೆ ಕುಸಿತ: ಲಾಕ್ ಡೌನ್ ನಿಂದ ತಪ್ಪಿದ ಭಾರಿ ಅನಾಹುತ

18/06/2021, 19:24

ಕಿನ್ನಿಗೋಳಿ(reporterkarnataka news): ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಕಾರಣ ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ದೇವರಗುಡ್ಡೆ ಬಳಿ ಇಂದು ಗುಡ್ಡ ಕುಸಿದಿದ್ದು, ಬಂಡೆಗಲ್ಲು ರಸ್ತೆಗೆ ಬಿದ್ದಿದೆ. ಲಾಕ್ ಡೌನ್ ನಿಂದ ವಾಹನ ಮತ್ತು ಜನ ಸಂಚಾರ ವಿರಳವಾಗಿರುವುದರಿಂದ ಭಾರಿ ಅನಾಹುತ ತಪ್ಪಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಕಟೀಲು- ಬಜಪೆ ರಾಜ್ಯ ಹೆದ್ದಾರಿ ವಿಸ್ತರಿಸಲು ಹೆದ್ದಾರಿ ಬದಿಯ ಗುಡ್ಡಗಳನ್ನು ಕಡಿದು ರಸ್ತೆ ಅಗಲಗೊಳಿಸಲಾಗಿತ್ತು. ಈ ಗುಡ್ಡ ಮಳೆಗೆ ಕುಸಿದು ಬಿದ್ದಿದೆ.

ಕಳೆದ ಮಳೆಗಾಲದಲ್ಲಿ ಕೂಡ ದೇವರಗುಡ್ಡೆ ಬಳಿ ರಸ್ತೆ ಕುಸಿದಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.

 ಶುಕ್ರವಾರ ಮುಂಜಾನೆ ಸುರಿದ ಭಾರಿ ಮಳೆಗೆ ರಸ್ತೆ ಬದಿ ಗುಡ್ಡದ ಬೃಹದಾಕಾರದ ಬಂಡೆಕಲ್ಲು ಸಹಿತ ಮಣ್ಣು ಮುಖ್ಯರಸ್ತೆಗೆ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿತು. ಸದಾ ಕಾಲ ಬ್ಯುಸಿಯಾಗಿರುವ ಕಟೀಲು- ಬಜಪೆ ರಾಜ್ಯ ಹೆದ್ದಾರಿ ಈಗ ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಜನ- ವಾಹನ ಸಂಚಾರ ಅತಿ ವಿರಳವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು