1:25 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು