1:16 PM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು