2:14 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು