9:51 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು