7:59 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಏನ್  ಮಹಾನ್ ಹರಿಶ್ಚಂದ್ರರಾ ? ಅವರಿಂದ ನಾನು ರಾಜಕೀಯ ಕಲಿಯಬೇಕಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ

18/06/2021, 21:18

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನ್ ಮಹಾನ್ ಹರಿಶ್ಚಂದ್ರರಾ ? ಅವರೇನು ಸಾಚಾನ? ಸಿದ್ದರಾಮಯ್ಯ ಅವರಿಂದ ರಾಜಕೀಯ ಮಾಡೋದನ್ನ ನಾನು ಕಲಿಯಬೇಕಿಲ್ಲ ಎಂದು ಜನತಾದಳ ನಾಯಕ ಎಚ್. ಡಿ.ಕುಮಾರಸ್ವಾಮಿ ಹೇಳಿದರು.

ಮಾಲೂರಿನಲ್ಲಿ ಜೆಡಿಎಸ್ ಮುಖಂಡ ಜಿ.ಇ.ರಾಮೇಗೌಡ ಆಯೋಜಿಸಿದ 2000 ಸಾವಿರ ಕೊರೊನಾ ವಾರಿಯರ್ಸ್ ಗಳಿಗೆ ದಿನಸಿ ಕಿಟ್ ವಿತರಣೆ ಹಾಗೂ ಕೊರೊನಾದಿಂದ  ಮೃತಪಟ್ಟ ಕುಟುಂಬಕ್ಕೆ 10 ಸಾವಿರ ರೂ. ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು 

ನನ್ನ ಪಕ್ಷವನ್ನ ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ ನಾನು. ಜೆಡಿಎಸ್ ಪಕ್ಷವನ್ನ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷ ನಮ್ಮದು. ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಪಕ್ಷದ ವಿರುದ್ದ ಕುಮಾರಸ್ವಾಮಿ ಹರಿಹಾಯ್ದರು.

2008ರ ಚುನಾವಣೆಯಲ್ಲಿ ನೀವೇ ಯಡಿಯೂರಪ್ಪ ಅವರ ಬಳಿ ಹಣ ಪಡೆದಿದ್ದೀರಾ? ಇತಿಹಾಸ ಇದೆ, ನಿಮ್ಮ ಜಾಯಮಾನ ಅದು. 2008ರಲ್ಲಿ ಸಿದ್ದರಾಮಯ್ಯ ಆಪ್ತರೊಬ್ಬರು ಹಣ ಪಡೆದಿದ್ದಾರೆ. ನಿಮ್ಮ ಆಪ್ತರು ಎಷ್ಟು ಹಣ ಪಡೆದಿದ್ದರು. ಆಪರೇಷನ್ ಕಮಲದಲ್ಲಿ ಹಣವನ್ನು ಪಡೆದಿದ್ದರು. ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಅಂತಾ ಗೊತ್ತು. ನನ್ನ ಪಕ್ಷದ ಬಗ್ಗೆಯಾಗಲಿ, ನನ್ನ ಬಗ್ಗೆಯಾಗಲಿ ಲಘುವಾಗಿ ಮಾತಾಡಿದ್ರೆ ಹುಷಾರ್ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು