1:58 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Good News: ಮಹಿಳಾ ಸ್ವಸಹಾಯ ಸಂಘಗಳಿಗೆ ಸರಕಾರದಿಂದ ಬಡ್ಡಿ ರಹಿತ ಸಾಲ

21/06/2022, 09:18

ಬೆಂಗಳೂರು(reporterkarnataka.com):

ರಾಜ್ಯದಲ್ಲಿನ ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದು ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಇಂದು ವಿಜಯನಗರ ನಗರದಲ್ಲಿ ಆಯೋಜಿಸಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, 32 ಫಲಾನುಭವಿಗಳಿಗೆ ಸಾಗುವಳಿ ಪಟ್ಟ, 44 ಮಹಿಳಾ ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷ ಬಡ್ಡಿರಹಿತ ಸಾಲ ಸೌಲಭ್ಯದ ಚೆಕ್ ವಿತರಿಸಿದರು.

ನಾನು ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷನಾಗಿದ್ದು, ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ಕೊಡುವ ಯೋಜನೆ ಇದೆ. ಅನೇಕ ಸ್ವಸಹಾಯ ಸಂಘಗಳು ಸಕಾಲಕ್ಕೆ ಹಣ ಮರುಪಾವತಿಸುತ್ತಿವೆ ಎಂದರು.

ಸದ್ಯ ಮಹಿಳಾ ಸ್ವಸಹಾಯ ಸಂಘಗಳಿಗೆ 1 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಕೊಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸುವಂತೆ ನಾನು ಸೇರಿದಂತೆ ಜನಪ್ರತಿನಿಧಿಗಳು ಕೋರಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು