11:36 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು