7:03 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು