5:32 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು