9:47 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು