7:37 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು