8:23 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ನಾವೆಲ್ಲರೂ ಯೋಗದ ಹಾದಿಯಲ್ಲಿ ಸಾಗೋಣ:  ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಕರೆ

21/06/2022, 15:12

ಮೈಸೂರು(reporterkarnataka.com): ಯೋಗ ದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೈಸೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಯೋಗದ ಹಿನ್ನೆಲೆಯನ್ನು ನೆನೆದು ಹಾಡಿ ಹೊಗಳಿದರು.

ಯೋಗ ಈಗ ಇಡೀ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಯೋಗ ಎನ್ನುವುದು ಆತ್ಮಪ್ರಕಾಶಕ್ಕೆ ನೆರವಾಗುವ ಪ್ರಕ್ರಿಯೆಯಾಗಿದೆ. ಭಾರತವು ಸದಾ ವಿಶ್ವದ ಒಳಿತು ಬಯಸಿದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. 

‘ಮಾನವತೆಗೆ ಯೋಗ ಎನ್ನುವುದು’ ಈ ವರ್ಷದ ಘೋಷವಾಕ್ಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನ ನಡೆಯುತ್ತಿದೆ. ಇವು ಭಾರತದ ಇತಿಹಾಸಕ್ಕೆ ಸಾಕ್ಷಿ, ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ. ಯೋಗದಿನದ ಪ್ರಯುಕ್ತ ಎಲ್ಲರನ್ನೂ ಬೆಸೆಯುತ್ತಿದ್ದೇವೆ. ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು