12:57 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ನಾವೆಲ್ಲರೂ ಯೋಗದ ಹಾದಿಯಲ್ಲಿ ಸಾಗೋಣ:  ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಕರೆ

21/06/2022, 15:12

ಮೈಸೂರು(reporterkarnataka.com): ಯೋಗ ದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೈಸೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಯೋಗದ ಹಿನ್ನೆಲೆಯನ್ನು ನೆನೆದು ಹಾಡಿ ಹೊಗಳಿದರು.

ಯೋಗ ಈಗ ಇಡೀ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಯೋಗ ಎನ್ನುವುದು ಆತ್ಮಪ್ರಕಾಶಕ್ಕೆ ನೆರವಾಗುವ ಪ್ರಕ್ರಿಯೆಯಾಗಿದೆ. ಭಾರತವು ಸದಾ ವಿಶ್ವದ ಒಳಿತು ಬಯಸಿದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. 

‘ಮಾನವತೆಗೆ ಯೋಗ ಎನ್ನುವುದು’ ಈ ವರ್ಷದ ಘೋಷವಾಕ್ಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನ ನಡೆಯುತ್ತಿದೆ. ಇವು ಭಾರತದ ಇತಿಹಾಸಕ್ಕೆ ಸಾಕ್ಷಿ, ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ. ಯೋಗದಿನದ ಪ್ರಯುಕ್ತ ಎಲ್ಲರನ್ನೂ ಬೆಸೆಯುತ್ತಿದ್ದೇವೆ. ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು