6:42 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ: ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ; ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಿಕೊಳ್ಳಿ

19/06/2021, 07:07

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ,ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಬಂದು ಲಸಿಕೆ‌ ಹಾಕಲಿರುವರು.ಹೀಗಾಗಿ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಲು ಕೋರಲಾಗಿದೆ. ನೊಂದಾವಣೆಯಾದ ಬಳಿಕ ದಿನ ನಿಗದಿಪಡಿಸಿ ಮನೆ ಮನೆಗೆ ಬಂದು ಲಸಿಕೆ‌ ನೀಡಲಾಗುವುದು.

ಮನೆ ಮನೆ ಲಸಿಕಾ‌ ವಾಹನಕ್ಕೆ ದಿನಾಂಕ 19-6-2021 ರಂದು ಬೆಳಿಗ್ಗೆ 9.30 ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು