9:25 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು