2:16 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು