4:39 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು