7:15 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ;  ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ

22/06/2022, 20:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು,  ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಕೂಡ್ಲಿಗಿಯಿಂದ ಈಚಲ ಬೊಮ್ಮನಹಳ್ಳಿಗೆ ತೆರಳುತ್ತಿದ್ದ ಅಪೇ ಆಟೋ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನ ಮುಂಬದಿ ಚಕ್ರದ ಟೈರ್ ಸ್ಫೋಟಗೊಂಡಿದ್ದು, ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.  ಆಟೋದಲ್ಲಿದ್ದವರೆಲ್ಲರೂ ಈಚಲ ಬೊಮ್ಮನಹಳ್ಳಿ ವಾಸಿಗಳಾಗಿದ್ದು, ಬಹುತೇಕ ವಿದ್ಯಾರ್ಥಿಗಳಾಗಿದ್ದಾರೆ.

ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತರಾಗಿದ್ದಾರೆ.



ವಿದ್ಯಾರ್ಥಿನಿ ಪುಷ್ಪಲತಾ(22) ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾಳೆ. ಬಳ್ಳಾರಿ ವಿಮ್ಸ್ ಗೆ ದಾಖಲಿಸುವಾಗ ಈಡಿಗರ ಮೀನಾಕ್ಷಿ(30) ಮೃತಪಟ್ಟಿದ್ದಾಳೆ. ರಮೇಶ ಎಂಬುವರು ಎರಡು ಕಾಲುಗಳು ಜಖಂಗೊಂಡಿದ್ದು, ಗಾಯಾಳುಗಾಳಾಗಿರುವ ಸ್ವಾತಿ, ಈಡಿಗರ ಅನುಷಾ, ಅಭಿಲಾಷಾ, ಪ್ರಭಾವತಿ, ಕೆ.ಚಂದನ, ಕೆ.ನಾಗವೇಣಿ ಸೇರಿದಂತೆ ಇತರರು ಗಾಯಗೊಂಡಿದ್ದಾರೆ, ಕೆಲವರನ್ನು ಕೂಡ್ಲಿಗಿ ಹಾಗೂ ಇನ್ನೂ ಕೆಲವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಕೂಡ್ಲಿಗಿ ಆಸ್ಪತ್ರೆಗೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ, ಸಿಪಿಐ ವಸಂತ ಅಸೋದೆ ಬೆಟ್ಟಿ ನೀಡಿದ್ದಾರೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆಸ್ಪತ್ರೆ ಆವರಣದಲ್ಲಿ ಮೃತರ ಪೋಷಕರ ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು