10:26 PM Monday20 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ;  ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ

22/06/2022, 20:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು,  ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಕೂಡ್ಲಿಗಿಯಿಂದ ಈಚಲ ಬೊಮ್ಮನಹಳ್ಳಿಗೆ ತೆರಳುತ್ತಿದ್ದ ಅಪೇ ಆಟೋ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನ ಮುಂಬದಿ ಚಕ್ರದ ಟೈರ್ ಸ್ಫೋಟಗೊಂಡಿದ್ದು, ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.  ಆಟೋದಲ್ಲಿದ್ದವರೆಲ್ಲರೂ ಈಚಲ ಬೊಮ್ಮನಹಳ್ಳಿ ವಾಸಿಗಳಾಗಿದ್ದು, ಬಹುತೇಕ ವಿದ್ಯಾರ್ಥಿಗಳಾಗಿದ್ದಾರೆ.

ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತರಾಗಿದ್ದಾರೆ.



ವಿದ್ಯಾರ್ಥಿನಿ ಪುಷ್ಪಲತಾ(22) ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾಳೆ. ಬಳ್ಳಾರಿ ವಿಮ್ಸ್ ಗೆ ದಾಖಲಿಸುವಾಗ ಈಡಿಗರ ಮೀನಾಕ್ಷಿ(30) ಮೃತಪಟ್ಟಿದ್ದಾಳೆ. ರಮೇಶ ಎಂಬುವರು ಎರಡು ಕಾಲುಗಳು ಜಖಂಗೊಂಡಿದ್ದು, ಗಾಯಾಳುಗಾಳಾಗಿರುವ ಸ್ವಾತಿ, ಈಡಿಗರ ಅನುಷಾ, ಅಭಿಲಾಷಾ, ಪ್ರಭಾವತಿ, ಕೆ.ಚಂದನ, ಕೆ.ನಾಗವೇಣಿ ಸೇರಿದಂತೆ ಇತರರು ಗಾಯಗೊಂಡಿದ್ದಾರೆ, ಕೆಲವರನ್ನು ಕೂಡ್ಲಿಗಿ ಹಾಗೂ ಇನ್ನೂ ಕೆಲವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಕೂಡ್ಲಿಗಿ ಆಸ್ಪತ್ರೆಗೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ, ಸಿಪಿಐ ವಸಂತ ಅಸೋದೆ ಬೆಟ್ಟಿ ನೀಡಿದ್ದಾರೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆಸ್ಪತ್ರೆ ಆವರಣದಲ್ಲಿ ಮೃತರ ಪೋಷಕರ ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು