1:46 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನು ಇಲ್ಲ: ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ 

22/06/2022, 20:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ.ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಜಾರಿದರು.

ಇಲ್ಲಿ ಬುಧವಾರ ಮಾಧ್ಯಮ ಜತೆ ಮಾತನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ತಾರೆ, ಜನ ತುಚ್ಛವಾಗಿ ನೋಡ್ತಾರೆ ಎಂದರು.

2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ರು, ಜನ ತೀರ್ಪು ನೀಡಿದ್ರು. ಉದ್ಧವ ಠಾಕ್ರೆ ಉದ್ದಟತನ ಮಾಡಿ ೮ ಪಕ್ಷ ಸೇರಿಸಿಕೊಂಡು ಸಿಎಂ ಆದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ.

ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು