2:21 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನಿಂದ  ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ 

23/06/2022, 00:13

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ ನಗರದ ಶಕ್ತಿನಗರದ ಕಲಾಂಗಣದಲ್ಲಿ ಜರುಗಿತು.

ಕಾರ್ಯಾಗಾರವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರಾದ Snr.PPF. ಭರತ್ ದಾಸ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ರಾಷ್ಟ್ರೀಯ ನಿರ್ದೇಶಕರಾದ(ಆಡಳಿತ)Snr.Csl.PPF. ಜೋಸ್ ಕಂಡೋತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಂತಾರಾಷ್ಟ್ರೀಯ ನಿಕಟ ಪೂರ್ವ ಅಧ್ಯಕ್ಷರಾದ  Snr.PPF. ಡಾ.ಕೇದಿಗೆ ಅರವಿಂದ್ ರಾವ್, ರಾಷ್ಟ್ರೀಯ ಉಪಾಧ್ಯಕ್ಷರಾದ Snr.PPF. ಸಂಪತ್ ಕುಮಾರ್,  ಕಾರ್ಯದರ್ಶಿ Snr.PPF.ರಾಜೇಶ್ ವೈಭವ್,ಜನರಲ್ ಲೀಗಲ್ ಕೌನ್ಸಿಲ್ Snr.Csl.ವರ್ಗೀಸ್  ವೈದ್ಯನ್, ಕೋಶಾಧಿಕಾರಿ Snr.PPF ಉದಯಭಾನು, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನಿನ ನಿಕಟಪೂರ್ವ ಅಧ್ಯಕ್ಷರಾದ Snr.PPF.ಜಿ.ಕೆ. ಹರಿಪ್ರಸಾದ ರೈ, ಕಾರ್ಯದರ್ಶಿ Snr.PPF. ಫ್ಲೇವಿ ಡಿಮೆಲ್ಲೊ ಉಪಸ್ಥಿತರಿದ್ದರು. 


ತರಬೇತಿ ಕಮ್ಮಟವನ್ನು ರಾಜೇಶ್ ವೈಭವ್ ಸಂಯೋಜಿಸಿದರು. ತರಬೇತುದಾರರಾಗಿ Snr.PPF. ನಾಗೇಶ್, ವರ್ಗೀಸ್ ವೈದ್ಯನ್, ಎಂ.ಆರ್.ಜಯೇಶ್, ಸಂಪತ್ ಕುಮಾರ್, ಉದಯಭಾನು, ಕೇದಿಗೆ ಅರವಿಂದ ರಾವ್  ಅವರು ಆಗಮಿಸಿ ತರಬೇತಿ ನಡೆಸಿಕೊಟ್ಟರು. ಕರ್ನಾಟಕ ರಾಜ್ಯದ  27 ಲೀಜನ್ ಗಳಿಂದ ಸುಮಾರು 100 ರಷ್ಟು ಪ್ರತಿನಿಧಿಗಳು ಭಾಗವಹಿಸಿದ್ದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಮುಖಪತ್ರಿಕೆ ‘ಇನ್ಸ್ಕ್ರೋಲ್’ಮತ್ತು ಮಂಗಳೂರು ಲೀಜನಿನ ಮುಖ ಪತ್ರಿಕೆ ‘ಸುಮಂಗಲಾ’ ವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರು ಅನಾವರಣಗೊಳಿಸಿದರು. ಲೀಜನ್ ಅಧ್ಯಕ್ಷ  Snr.PPF. ಕಿಶೋರ್ ಫೆರ್ನಾಂಡಿಸ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ದೇಶಕ Snr ದತ್ತಾತ್ರೇಯ ವಂದಿಸಿದರು. Snr.PPF.ಶಾಲಿನಿ ಸುವರ್ಣ ಸೀನಿಯರ್ ವಾಣಿ ಪಠಿಸಿದರು. ಜೇಸಿ ಚೇತನಾ ದತ್ತಾತ್ರೇಯ ಕಾರ್ಯಕ್ರಮ  ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು