6:27 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನಿಂದ  ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ 

23/06/2022, 00:13

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ ನಗರದ ಶಕ್ತಿನಗರದ ಕಲಾಂಗಣದಲ್ಲಿ ಜರುಗಿತು.

ಕಾರ್ಯಾಗಾರವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರಾದ Snr.PPF. ಭರತ್ ದಾಸ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ರಾಷ್ಟ್ರೀಯ ನಿರ್ದೇಶಕರಾದ(ಆಡಳಿತ)Snr.Csl.PPF. ಜೋಸ್ ಕಂಡೋತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಂತಾರಾಷ್ಟ್ರೀಯ ನಿಕಟ ಪೂರ್ವ ಅಧ್ಯಕ್ಷರಾದ  Snr.PPF. ಡಾ.ಕೇದಿಗೆ ಅರವಿಂದ್ ರಾವ್, ರಾಷ್ಟ್ರೀಯ ಉಪಾಧ್ಯಕ್ಷರಾದ Snr.PPF. ಸಂಪತ್ ಕುಮಾರ್,  ಕಾರ್ಯದರ್ಶಿ Snr.PPF.ರಾಜೇಶ್ ವೈಭವ್,ಜನರಲ್ ಲೀಗಲ್ ಕೌನ್ಸಿಲ್ Snr.Csl.ವರ್ಗೀಸ್  ವೈದ್ಯನ್, ಕೋಶಾಧಿಕಾರಿ Snr.PPF ಉದಯಭಾನು, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನಿನ ನಿಕಟಪೂರ್ವ ಅಧ್ಯಕ್ಷರಾದ Snr.PPF.ಜಿ.ಕೆ. ಹರಿಪ್ರಸಾದ ರೈ, ಕಾರ್ಯದರ್ಶಿ Snr.PPF. ಫ್ಲೇವಿ ಡಿಮೆಲ್ಲೊ ಉಪಸ್ಥಿತರಿದ್ದರು. 


ತರಬೇತಿ ಕಮ್ಮಟವನ್ನು ರಾಜೇಶ್ ವೈಭವ್ ಸಂಯೋಜಿಸಿದರು. ತರಬೇತುದಾರರಾಗಿ Snr.PPF. ನಾಗೇಶ್, ವರ್ಗೀಸ್ ವೈದ್ಯನ್, ಎಂ.ಆರ್.ಜಯೇಶ್, ಸಂಪತ್ ಕುಮಾರ್, ಉದಯಭಾನು, ಕೇದಿಗೆ ಅರವಿಂದ ರಾವ್  ಅವರು ಆಗಮಿಸಿ ತರಬೇತಿ ನಡೆಸಿಕೊಟ್ಟರು. ಕರ್ನಾಟಕ ರಾಜ್ಯದ  27 ಲೀಜನ್ ಗಳಿಂದ ಸುಮಾರು 100 ರಷ್ಟು ಪ್ರತಿನಿಧಿಗಳು ಭಾಗವಹಿಸಿದ್ದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಮುಖಪತ್ರಿಕೆ ‘ಇನ್ಸ್ಕ್ರೋಲ್’ಮತ್ತು ಮಂಗಳೂರು ಲೀಜನಿನ ಮುಖ ಪತ್ರಿಕೆ ‘ಸುಮಂಗಲಾ’ ವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರು ಅನಾವರಣಗೊಳಿಸಿದರು. ಲೀಜನ್ ಅಧ್ಯಕ್ಷ  Snr.PPF. ಕಿಶೋರ್ ಫೆರ್ನಾಂಡಿಸ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ದೇಶಕ Snr ದತ್ತಾತ್ರೇಯ ವಂದಿಸಿದರು. Snr.PPF.ಶಾಲಿನಿ ಸುವರ್ಣ ಸೀನಿಯರ್ ವಾಣಿ ಪಠಿಸಿದರು. ಜೇಸಿ ಚೇತನಾ ದತ್ತಾತ್ರೇಯ ಕಾರ್ಯಕ್ರಮ  ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು