6:55 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನಿಂದ  ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ 

23/06/2022, 00:13

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ ನಗರದ ಶಕ್ತಿನಗರದ ಕಲಾಂಗಣದಲ್ಲಿ ಜರುಗಿತು.

ಕಾರ್ಯಾಗಾರವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರಾದ Snr.PPF. ಭರತ್ ದಾಸ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ರಾಷ್ಟ್ರೀಯ ನಿರ್ದೇಶಕರಾದ(ಆಡಳಿತ)Snr.Csl.PPF. ಜೋಸ್ ಕಂಡೋತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಂತಾರಾಷ್ಟ್ರೀಯ ನಿಕಟ ಪೂರ್ವ ಅಧ್ಯಕ್ಷರಾದ  Snr.PPF. ಡಾ.ಕೇದಿಗೆ ಅರವಿಂದ್ ರಾವ್, ರಾಷ್ಟ್ರೀಯ ಉಪಾಧ್ಯಕ್ಷರಾದ Snr.PPF. ಸಂಪತ್ ಕುಮಾರ್,  ಕಾರ್ಯದರ್ಶಿ Snr.PPF.ರಾಜೇಶ್ ವೈಭವ್,ಜನರಲ್ ಲೀಗಲ್ ಕೌನ್ಸಿಲ್ Snr.Csl.ವರ್ಗೀಸ್  ವೈದ್ಯನ್, ಕೋಶಾಧಿಕಾರಿ Snr.PPF ಉದಯಭಾನು, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನಿನ ನಿಕಟಪೂರ್ವ ಅಧ್ಯಕ್ಷರಾದ Snr.PPF.ಜಿ.ಕೆ. ಹರಿಪ್ರಸಾದ ರೈ, ಕಾರ್ಯದರ್ಶಿ Snr.PPF. ಫ್ಲೇವಿ ಡಿಮೆಲ್ಲೊ ಉಪಸ್ಥಿತರಿದ್ದರು. 


ತರಬೇತಿ ಕಮ್ಮಟವನ್ನು ರಾಜೇಶ್ ವೈಭವ್ ಸಂಯೋಜಿಸಿದರು. ತರಬೇತುದಾರರಾಗಿ Snr.PPF. ನಾಗೇಶ್, ವರ್ಗೀಸ್ ವೈದ್ಯನ್, ಎಂ.ಆರ್.ಜಯೇಶ್, ಸಂಪತ್ ಕುಮಾರ್, ಉದಯಭಾನು, ಕೇದಿಗೆ ಅರವಿಂದ ರಾವ್  ಅವರು ಆಗಮಿಸಿ ತರಬೇತಿ ನಡೆಸಿಕೊಟ್ಟರು. ಕರ್ನಾಟಕ ರಾಜ್ಯದ  27 ಲೀಜನ್ ಗಳಿಂದ ಸುಮಾರು 100 ರಷ್ಟು ಪ್ರತಿನಿಧಿಗಳು ಭಾಗವಹಿಸಿದ್ದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಮುಖಪತ್ರಿಕೆ ‘ಇನ್ಸ್ಕ್ರೋಲ್’ಮತ್ತು ಮಂಗಳೂರು ಲೀಜನಿನ ಮುಖ ಪತ್ರಿಕೆ ‘ಸುಮಂಗಲಾ’ ವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರು ಅನಾವರಣಗೊಳಿಸಿದರು. ಲೀಜನ್ ಅಧ್ಯಕ್ಷ  Snr.PPF. ಕಿಶೋರ್ ಫೆರ್ನಾಂಡಿಸ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ದೇಶಕ Snr ದತ್ತಾತ್ರೇಯ ವಂದಿಸಿದರು. Snr.PPF.ಶಾಲಿನಿ ಸುವರ್ಣ ಸೀನಿಯರ್ ವಾಣಿ ಪಠಿಸಿದರು. ಜೇಸಿ ಚೇತನಾ ದತ್ತಾತ್ರೇಯ ಕಾರ್ಯಕ್ರಮ  ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು