7:05 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು