6:59 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ

23/06/2022, 11:06

ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ.

ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.

ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು