10:09 PM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಅಲಂಕಾರು: ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಸನ್ಮಾನ ಸಮಾರಂಭ

23/06/2022, 12:07

ಉಪ್ಪಿನಂಗಡಿ(reporterkarnataka.com); ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಯಶ್ರೀ ಎಸ್. ಜನಾರ್ಧನ ಗೌಡ.ಕೆ. ಹಾಗೂ ಕಮಲ ಕೆ. ಅವರು ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಶಾಲಾ ಶಿಕ್ಷಕರ ಹಾಗೂ ಎಸ್ಡಿಎಂಸಿ ಅವರು ಮತ್ತು ಪೋಷಕರ ವತಿಯಿಂದ ಅವರನ್ನು ಸನ್ಮಾನಿಸಿ,ಬೀಳ್ಕೊಡಲಾಯಿತು.

ಗೋಪಾಲಕೃಷ್ಣ ಪಡ್ಡಿಲಾಯ  (ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು) ಮತ್ತು ಮುತ್ತಪ್ಪ ಪೂಜಾರಿ (ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸಿಎ ಬ್ಯಾಂಕ್ ಅಲಂಕಾರು) ಶ್ರೀ ರಾಮಕೃಷ್ಣ ಮಲ್ಲಾರ (ಅಧ್ಯಕ್ಷರು ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ) ಅವರು ಭಡ್ತಿಗೊಂಡ ಶಿಕ್ಷಕರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪದನಿಮಿತ್ತ SDMC ಸದಸ್ಯರು  ರವಿ ಪೂಜಾರಿ, ಪ್ರಕಾಶ್ ಬಿ.(ಅಲಂಕಾರು ಕ್ಲಸ್ಟರ್  ಸಮೂಹ ಸಂಪನ್ಮೂಲ ವ್ಯಕ್ತಿ) ಉಪಸ್ಥಿತರಿದ್ದರು.ಎಸ್ಡಿಎಂಸಿ ಅಧ್ಯಕ್ಷರ ದಯಾನಂದ ಕರ್ಕೇರ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ನಿಂಗರಾಜು ಕೆ.ಪಿ., ಎಸ್ಡಿಎಂಸಿ ಸದಸ್ಯರಾದ ಅಬುಬಕರ್ ನಕ್ಕರೆ, ದಿನೇಶ್ ದೇವಾಡಿಗ ಹರೀಶ್ ಗೌಡ ನೆಕ್ಕರೆ, ವಿನುತಾ, ಸೌಮ್ಯ, ಕಮಲ,ಮೋಹಿನಿ, ವಿಜಯಲಕ್ಷ್ಮಿ , ನಸೀಮಾ, ಶಿಕ್ಷಕರಾದ ವನಜ, ವಿಶ್ವ ನಾಯ್ಕ, ಅತಿಥಿ ಶಿಕ್ಷಕರಾದ ವನಿತಾ, ಪ್ರತಿಮಾ, ರೋಶನಿ ಹಾಗೂ ಗೌರವ ಶಿಕ್ಷಕರಾದ ಜ್ಯೋತಿ,  ರಮ್ಯ, ಅಖಿಲ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಅಶ್ವಿನಿ ಕುಮಾರಿ, ವಾಣಿಶ್ರೀ ಮುಂತಾದವರು ಭಾಗಿಯಾಗಿದ್ದರು. ಮುಖ್ಯಗುರುಗಳು ನಿಂಗರಾಜು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು