2:49 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಅಲಂಕಾರು: ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಸನ್ಮಾನ ಸಮಾರಂಭ

23/06/2022, 12:07

ಉಪ್ಪಿನಂಗಡಿ(reporterkarnataka.com); ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಯಶ್ರೀ ಎಸ್. ಜನಾರ್ಧನ ಗೌಡ.ಕೆ. ಹಾಗೂ ಕಮಲ ಕೆ. ಅವರು ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಶಾಲಾ ಶಿಕ್ಷಕರ ಹಾಗೂ ಎಸ್ಡಿಎಂಸಿ ಅವರು ಮತ್ತು ಪೋಷಕರ ವತಿಯಿಂದ ಅವರನ್ನು ಸನ್ಮಾನಿಸಿ,ಬೀಳ್ಕೊಡಲಾಯಿತು.

ಗೋಪಾಲಕೃಷ್ಣ ಪಡ್ಡಿಲಾಯ  (ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು) ಮತ್ತು ಮುತ್ತಪ್ಪ ಪೂಜಾರಿ (ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸಿಎ ಬ್ಯಾಂಕ್ ಅಲಂಕಾರು) ಶ್ರೀ ರಾಮಕೃಷ್ಣ ಮಲ್ಲಾರ (ಅಧ್ಯಕ್ಷರು ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ) ಅವರು ಭಡ್ತಿಗೊಂಡ ಶಿಕ್ಷಕರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪದನಿಮಿತ್ತ SDMC ಸದಸ್ಯರು  ರವಿ ಪೂಜಾರಿ, ಪ್ರಕಾಶ್ ಬಿ.(ಅಲಂಕಾರು ಕ್ಲಸ್ಟರ್  ಸಮೂಹ ಸಂಪನ್ಮೂಲ ವ್ಯಕ್ತಿ) ಉಪಸ್ಥಿತರಿದ್ದರು.ಎಸ್ಡಿಎಂಸಿ ಅಧ್ಯಕ್ಷರ ದಯಾನಂದ ಕರ್ಕೇರ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ನಿಂಗರಾಜು ಕೆ.ಪಿ., ಎಸ್ಡಿಎಂಸಿ ಸದಸ್ಯರಾದ ಅಬುಬಕರ್ ನಕ್ಕರೆ, ದಿನೇಶ್ ದೇವಾಡಿಗ ಹರೀಶ್ ಗೌಡ ನೆಕ್ಕರೆ, ವಿನುತಾ, ಸೌಮ್ಯ, ಕಮಲ,ಮೋಹಿನಿ, ವಿಜಯಲಕ್ಷ್ಮಿ , ನಸೀಮಾ, ಶಿಕ್ಷಕರಾದ ವನಜ, ವಿಶ್ವ ನಾಯ್ಕ, ಅತಿಥಿ ಶಿಕ್ಷಕರಾದ ವನಿತಾ, ಪ್ರತಿಮಾ, ರೋಶನಿ ಹಾಗೂ ಗೌರವ ಶಿಕ್ಷಕರಾದ ಜ್ಯೋತಿ,  ರಮ್ಯ, ಅಖಿಲ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಅಶ್ವಿನಿ ಕುಮಾರಿ, ವಾಣಿಶ್ರೀ ಮುಂತಾದವರು ಭಾಗಿಯಾಗಿದ್ದರು. ಮುಖ್ಯಗುರುಗಳು ನಿಂಗರಾಜು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು