2:44 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿಯಿಂದ ಜನಪರ ಕಾರ್ಯಕ್ರಮ: ಶಾಸಕ ವೇದವ್ಯಾಸ್ ಕಾಮತ್ ಮೆಚ್ಚುಗೆ

23/06/2022, 12:52

ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ಅಭಿವೃದ್ದಿ ಕಾಮಗಾರಿಗಳೊಂದಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್  ಹೇಳಿದರು.

ಅವರು ನಗರದ ಲೇಡಿಹಿಲ್‍ನಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಕಳೆದಿರುವ ನೆನಪಿಗಾಗಿ ಹಮ್ಮಿಕೊಳ್ಳಲಾದ ಮನಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿಗಾಗಿ ಜಾರಿಗೊಂಡಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಗರದ ಪರಿಸರಕ್ಕೆ ಪೂರಕವಾದ ಮನಮಹೋತ್ಸವ, ಸ್ವಚ್ಚತಾ ಅಭಿಯಾನಗಳನ್ನು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ, ಆ ಮೂಲಕ ಸ್ಮಾರ್ಟ್ ಸಿಟಿ ಯೋಜನೆ ಕೇವಲ ಕಾಮಗಾರಿಗಳಿಗಷ್ಟೇ ಸೀಮಿತವಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ನಗರಗಳನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆ ಜಾರಿಯಾಗಿ 7 ವರ್ಷ ಕಳೆದಿದೆ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತಿರುವ ಪ್ರಯುಕ್ತ ಏಳು ಎಂಬ ಸಂಖ್ಯೆಯನ್ನು ಸಾಂಕೇತಿಕವಾಗಿಟ್ಟುಕೊಂಡು ದೇಶದಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಮಹಾನಗರಪಾಲಿಕೆ ವತಿಯಿಂದ ಜೂ.19ರಿಂದ 25ರ ವರೆಗೆ ಜನಪರ ಕಾರ್ಯಕ್ರಮಗಳೊಂದಿಗೆ ಏಳು ತಂಡಗಳ, ಏಳು ಓವರ್‍ಗಳ ಪಂದ್ಯಾಟವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 


ಉಪ ಮೇಯರ್ ಸುಮಂಗಲಾ ರಾವ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಸ್ಮಾರ್ಟ್ ಸಿಟಿ ನಿರ್ದೇಶಕ ಸುಧೀರ್ ಶೆಟ್ಟಿ, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ್ ಪ್ರಭಾ, ಚಂದ್ರಕಾಂತ್, ಮಹಾನಗರ ಪಾಲಿಕೆ ಸದಸ್ಯ ಗಣೇಶ್ ಕುಲಾಲ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು