3:36 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ  ಜೂನ್ 26ರಂದು ‘ಗುರುನಮನ’

23/06/2022, 20:38

ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.

ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶಿಕ್ಷಕೇತರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕೆನರಾ ಶಿಕ್ಷಣ ಸಂಸ್ಥೆಗಳ ವಿವಿಧ ಸಂಘಗಳ ಸಹಯೋಗದಿಂದ ನಡೆಯುವ ಈ ಗುರುನಮನ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರಂಗನಾಥ ಭಟ್ ಹಾಗೂ.ಹಿರಿಯ ಪತ್ರಕರ್ತರು ಮತ್ತು ಕೆನರಾ ಹಳೆ ವಿದ್ಯಾರ್ಥಿ ಮನೋಹರ ಪ್ರಸಾದ್ ತಿಳಿಸಿದರು.

ಸಂಸ್ಥೆಗಳಲ್ಲಿ ಈಗ ಲಭ್ಯವಿರುವ ದಾಖಲೆ ಪತ್ರಗಳನ್ನು ಆಧರಿಸಿ ಅವರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಅವರಲ್ಲಿ ಅತ್ಯಂತ ಹಿರಿಯರಾಗಿರುವವರು 84ರ ಹರೆಯದ ನಿವೃತ್ತ ಶಿಕ್ಷಕಿ ಮಾಲತಿ ಅವರು. ಈ ಎಲ್ಲ ನಿವೃತ್ತ ಶಿಕ್ಷಕರು-ಶಿಕ್ಷಕೇತರರು ತಮ್ಮ ಸೇವಾ ಬದ್ಧತೆಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಉನ್ನತಿಗೆ ಕಾರಣರಾಗಿದ್ದಾರೆ ಎಂದು ಅವರು ನುಡಿದರು.

ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಈಗ ಕೆ.ಜಿ. ಯಿಂದ ಎಂಜಿನಿಯರಿಂಗ್ ವರೆಗೆ 11 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ . 8592 ಮಂದಿ ವಿದ್ಯಾರ್ಥಿಗಳಿದ್ದಾರೆ. ಗುರುನಮನ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆಗಳನ್ನು ಸ್ವಯಂಸೇವಕರು ನಡೆಸಿದ್ದಾರೆ. ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಮುನ್ನುಡಿಯಾಗುವುದು ಎಂಬ ನಿರೀಕ್ಷೆ ಇದೆ. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತಂತಹ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸುತ್ತೇವೆ ಎಂದರು.

ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪಿಆರ್ ಒ ಉಜ್ವಲ್,  ಕೆನರಾ ಹಳೆ ವಿದ್ಯಾರ್ಥಿಗಳಾಗಿರುವ ಸುಧೀರ ಭಕ್ತ ಮತ್ತು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು