2:38 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ  ಜೂನ್ 26ರಂದು ‘ಗುರುನಮನ’

23/06/2022, 20:38

ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.

ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶಿಕ್ಷಕೇತರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕೆನರಾ ಶಿಕ್ಷಣ ಸಂಸ್ಥೆಗಳ ವಿವಿಧ ಸಂಘಗಳ ಸಹಯೋಗದಿಂದ ನಡೆಯುವ ಈ ಗುರುನಮನ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರಂಗನಾಥ ಭಟ್ ಹಾಗೂ.ಹಿರಿಯ ಪತ್ರಕರ್ತರು ಮತ್ತು ಕೆನರಾ ಹಳೆ ವಿದ್ಯಾರ್ಥಿ ಮನೋಹರ ಪ್ರಸಾದ್ ತಿಳಿಸಿದರು.

ಸಂಸ್ಥೆಗಳಲ್ಲಿ ಈಗ ಲಭ್ಯವಿರುವ ದಾಖಲೆ ಪತ್ರಗಳನ್ನು ಆಧರಿಸಿ ಅವರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಅವರಲ್ಲಿ ಅತ್ಯಂತ ಹಿರಿಯರಾಗಿರುವವರು 84ರ ಹರೆಯದ ನಿವೃತ್ತ ಶಿಕ್ಷಕಿ ಮಾಲತಿ ಅವರು. ಈ ಎಲ್ಲ ನಿವೃತ್ತ ಶಿಕ್ಷಕರು-ಶಿಕ್ಷಕೇತರರು ತಮ್ಮ ಸೇವಾ ಬದ್ಧತೆಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಉನ್ನತಿಗೆ ಕಾರಣರಾಗಿದ್ದಾರೆ ಎಂದು ಅವರು ನುಡಿದರು.

ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಈಗ ಕೆ.ಜಿ. ಯಿಂದ ಎಂಜಿನಿಯರಿಂಗ್ ವರೆಗೆ 11 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ . 8592 ಮಂದಿ ವಿದ್ಯಾರ್ಥಿಗಳಿದ್ದಾರೆ. ಗುರುನಮನ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆಗಳನ್ನು ಸ್ವಯಂಸೇವಕರು ನಡೆಸಿದ್ದಾರೆ. ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಮುನ್ನುಡಿಯಾಗುವುದು ಎಂಬ ನಿರೀಕ್ಷೆ ಇದೆ. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತಂತಹ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸುತ್ತೇವೆ ಎಂದರು.

ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪಿಆರ್ ಒ ಉಜ್ವಲ್,  ಕೆನರಾ ಹಳೆ ವಿದ್ಯಾರ್ಥಿಗಳಾಗಿರುವ ಸುಧೀರ ಭಕ್ತ ಮತ್ತು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು