2:11 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ  ಜೂನ್ 26ರಂದು ‘ಗುರುನಮನ’

23/06/2022, 20:38

ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.

ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶಿಕ್ಷಕೇತರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕೆನರಾ ಶಿಕ್ಷಣ ಸಂಸ್ಥೆಗಳ ವಿವಿಧ ಸಂಘಗಳ ಸಹಯೋಗದಿಂದ ನಡೆಯುವ ಈ ಗುರುನಮನ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರಂಗನಾಥ ಭಟ್ ಹಾಗೂ.ಹಿರಿಯ ಪತ್ರಕರ್ತರು ಮತ್ತು ಕೆನರಾ ಹಳೆ ವಿದ್ಯಾರ್ಥಿ ಮನೋಹರ ಪ್ರಸಾದ್ ತಿಳಿಸಿದರು.

ಸಂಸ್ಥೆಗಳಲ್ಲಿ ಈಗ ಲಭ್ಯವಿರುವ ದಾಖಲೆ ಪತ್ರಗಳನ್ನು ಆಧರಿಸಿ ಅವರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಅವರಲ್ಲಿ ಅತ್ಯಂತ ಹಿರಿಯರಾಗಿರುವವರು 84ರ ಹರೆಯದ ನಿವೃತ್ತ ಶಿಕ್ಷಕಿ ಮಾಲತಿ ಅವರು. ಈ ಎಲ್ಲ ನಿವೃತ್ತ ಶಿಕ್ಷಕರು-ಶಿಕ್ಷಕೇತರರು ತಮ್ಮ ಸೇವಾ ಬದ್ಧತೆಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಉನ್ನತಿಗೆ ಕಾರಣರಾಗಿದ್ದಾರೆ ಎಂದು ಅವರು ನುಡಿದರು.

ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಈಗ ಕೆ.ಜಿ. ಯಿಂದ ಎಂಜಿನಿಯರಿಂಗ್ ವರೆಗೆ 11 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ . 8592 ಮಂದಿ ವಿದ್ಯಾರ್ಥಿಗಳಿದ್ದಾರೆ. ಗುರುನಮನ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆಗಳನ್ನು ಸ್ವಯಂಸೇವಕರು ನಡೆಸಿದ್ದಾರೆ. ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಮುನ್ನುಡಿಯಾಗುವುದು ಎಂಬ ನಿರೀಕ್ಷೆ ಇದೆ. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತಂತಹ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸುತ್ತೇವೆ ಎಂದರು.

ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪಿಆರ್ ಒ ಉಜ್ವಲ್,  ಕೆನರಾ ಹಳೆ ವಿದ್ಯಾರ್ಥಿಗಳಾಗಿರುವ ಸುಧೀರ ಭಕ್ತ ಮತ್ತು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು