11:29 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ

23/06/2022, 21:16

ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. 

ಕಳೆದ ಬುಧವಾರದಂದು ಬೆಂಗ್ರೆ ಸ್ಯಾಂಡ್ಸ್ ಫಿಟ್ ನಿವಾಸಿ ಜಯ ಪುತ್ರನ್  ಅಳಿವೆ ಬಾಲಿನಿನ ಬಳಿ ಬೆಳಗಿನ ಜಾವ ಬೀಸು ಬಲೆಯೊಂದಿಗೆ ಮೀಗಾರಿಕೆ ಮಾಡುತಿದ್ದ ಸಂದರ್ಭದಲ್ಲಿ ಗಾಳಿ ಮಳೆಯ ರಭಸಕ್ಕೆ ನೀರಿಗೆ ಬಿದ್ದು ಮೃತಪಟ್ಟಿದ್ದರು‌. ಈ ವಿಚಾರ ತಿಳಿದ ತಕ್ಷಣ ರಾಜ್ಯ ಸರಕಾರದಿಂದ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದೆ. ಅದರಂತೆ ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಯಾಗಿದ್ದು, ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದರು.

ಮೀನುಗಾರರ ಕುರಿತು ನಮ್ಮ ಸರಕಾರದ ಅವಧಿಯಲ್ಲಿ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮೀನುಗಾರರ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಆಡಳಿತ ವ್ಯವಸ್ಥೆ ತ್ವರಿತವಾಗಿ ಸಹಕಾರ ನೀಡಿದೆ‌ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಬಿಜೆಪಿ ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಲೋಕೇಶ್ ಬೆಂಗ್ರೆ, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು