12:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ

23/06/2022, 21:16

ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. 

ಕಳೆದ ಬುಧವಾರದಂದು ಬೆಂಗ್ರೆ ಸ್ಯಾಂಡ್ಸ್ ಫಿಟ್ ನಿವಾಸಿ ಜಯ ಪುತ್ರನ್  ಅಳಿವೆ ಬಾಲಿನಿನ ಬಳಿ ಬೆಳಗಿನ ಜಾವ ಬೀಸು ಬಲೆಯೊಂದಿಗೆ ಮೀಗಾರಿಕೆ ಮಾಡುತಿದ್ದ ಸಂದರ್ಭದಲ್ಲಿ ಗಾಳಿ ಮಳೆಯ ರಭಸಕ್ಕೆ ನೀರಿಗೆ ಬಿದ್ದು ಮೃತಪಟ್ಟಿದ್ದರು‌. ಈ ವಿಚಾರ ತಿಳಿದ ತಕ್ಷಣ ರಾಜ್ಯ ಸರಕಾರದಿಂದ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದೆ. ಅದರಂತೆ ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಯಾಗಿದ್ದು, ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದರು.

ಮೀನುಗಾರರ ಕುರಿತು ನಮ್ಮ ಸರಕಾರದ ಅವಧಿಯಲ್ಲಿ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮೀನುಗಾರರ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಆಡಳಿತ ವ್ಯವಸ್ಥೆ ತ್ವರಿತವಾಗಿ ಸಹಕಾರ ನೀಡಿದೆ‌ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಬಿಜೆಪಿ ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಲೋಕೇಶ್ ಬೆಂಗ್ರೆ, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು