2:03 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ

23/06/2022, 21:16

ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. 

ಕಳೆದ ಬುಧವಾರದಂದು ಬೆಂಗ್ರೆ ಸ್ಯಾಂಡ್ಸ್ ಫಿಟ್ ನಿವಾಸಿ ಜಯ ಪುತ್ರನ್  ಅಳಿವೆ ಬಾಲಿನಿನ ಬಳಿ ಬೆಳಗಿನ ಜಾವ ಬೀಸು ಬಲೆಯೊಂದಿಗೆ ಮೀಗಾರಿಕೆ ಮಾಡುತಿದ್ದ ಸಂದರ್ಭದಲ್ಲಿ ಗಾಳಿ ಮಳೆಯ ರಭಸಕ್ಕೆ ನೀರಿಗೆ ಬಿದ್ದು ಮೃತಪಟ್ಟಿದ್ದರು‌. ಈ ವಿಚಾರ ತಿಳಿದ ತಕ್ಷಣ ರಾಜ್ಯ ಸರಕಾರದಿಂದ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದೆ. ಅದರಂತೆ ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಯಾಗಿದ್ದು, ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದರು.

ಮೀನುಗಾರರ ಕುರಿತು ನಮ್ಮ ಸರಕಾರದ ಅವಧಿಯಲ್ಲಿ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮೀನುಗಾರರ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಆಡಳಿತ ವ್ಯವಸ್ಥೆ ತ್ವರಿತವಾಗಿ ಸಹಕಾರ ನೀಡಿದೆ‌ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಬಿಜೆಪಿ ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಲೋಕೇಶ್ ಬೆಂಗ್ರೆ, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು