1:23 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಭಾಗಮಂಡಲ: ತುಂಬಿ ಹರಿಯುತ್ತಿರುವ 30ಕ್ಕೂ ಅಧಿಕ ಜಲಪಾತಗಳು; ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಕೊಡಗು!!

24/06/2022, 17:35

ಮಡಿಕೇರಿ(reporterkarnataka.com): ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದ್ದು, ರಾಜ್ಯಾದ್ಯಂತ ಬಿರುಸಿನ ಮಳೆಯಾಗುತ್ತಿದೆ.ಕೊಡಗು ಜಿಲ್ಲೆಯ ಗಡಿಯಂಚಿನ ಗ್ರಾಮ ಕರಿಕೆ ದೇಶದಲ್ಲಿಯೇ ಜಲಪಾತಗಳ ಗ್ರಾಮ ಎಂಬ ಖ್ಯಾತಿಗೆ ಪಾತ್ರವಾಗಿದೆ. ಪ್ರವಾಸಿಗರು ಬಹು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಿದ್ದಾರೆ.

ಭಾಗಮಂಡಲದಿಂದ ಕರಿಕೆಗೆ ಬರುವ ಹೆದ್ದಾರಿಯಲ್ಲಿ 30ಕ್ಕೂ ಅಧಿಕ ಜಲಪಾತಗಳು ಪ್ರವಾಸಿಗರನ್ನು ನಿಬ್ಬೆರಗಾಗಿಸುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಈ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಈ ದೃಶ್ಯಗಳನ್ನು ನೋಡಲು ಕರಿಕೆ ಗ್ರಾಮಕ್ಕೆ ನೂರಾರು ಪ್ರವಾಸಿಗರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಮೂವತ್ತಕ್ಕೂ ಅಧಿಕ ಜಲಪಾತಗಳು ಹೆದ್ದಾರಿಯ ಪಕ್ಕದಲ್ಲಿ ಕಾಣಸಿಗುವುದು ಇಲ್ಲಿಯ ವಿಶೇಷ.

30 ಕಿಲೋಮೀಟರ್ ದೂರದ ರಸ್ತೆಯಲ್ಲಿ ಪ್ರತಿ ಕಿಲೋಮೀಟರಿಗೂ ಒಂದಂತೆ ಜಲಪಾತಗಳು ಈ ಭಾಗದಲ್ಲಿ ಕಾಣಸಿಗುತ್ತದೆ. ಸುಳ್ಯದಿಂದ 30 ಕಿಲೋಮೀಟರ್ ದೂರದಲ್ಲಿದೆ ಇದು. ಮಡಿಕೇರಿಯಿಂದ 35 ಕಿಲೋಮೀಟರ್ ದೂರದಲ್ಲಿದೆ. ಇನ್ನೊಂದು ಕೇರಳದ ಮುಖಾಂತರವೂ ಈ ಭಾಗಕ್ಕೆ ನಾವು ಪ್ರವೇಶಿಸಬಹುದು. ಕಾಸರಗೋಡಿನಿಂದ ಪಾಣತ್ತೂರು ಭಾಗಕ್ಕೆ ನಾವು ಬಂದು ಕರಿಕೆ ತಲುಪಬಹುದು.

ಕರಿಕೆಯಿಂದ ಭಾಗಮಂಡಲ ರಸ್ತೆಯಲ್ಲಿ ಮಳೆಗಾಲದಲ್ಲಿ ಧುಮ್ಮಿಕ್ಕುವ ಈ ಜಲಪಾತಗಳು ಸ್ವರ್ಗವನ್ನೇ ಸೃಷ್ಟಿಸುತ್ತವೆ. ಮಾನ್ಸೂನ್ ಪ್ರವಾಸಕ್ಕೆ ಕರಿಕೆ ಹೇಳಿ ಮಾಡಿದ ಸ್ಥಳದಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು