12:00 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಭಾಗಮಂಡಲ: ತುಂಬಿ ಹರಿಯುತ್ತಿರುವ 30ಕ್ಕೂ ಅಧಿಕ ಜಲಪಾತಗಳು; ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಕೊಡಗು!!

24/06/2022, 17:35

ಮಡಿಕೇರಿ(reporterkarnataka.com): ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದ್ದು, ರಾಜ್ಯಾದ್ಯಂತ ಬಿರುಸಿನ ಮಳೆಯಾಗುತ್ತಿದೆ.ಕೊಡಗು ಜಿಲ್ಲೆಯ ಗಡಿಯಂಚಿನ ಗ್ರಾಮ ಕರಿಕೆ ದೇಶದಲ್ಲಿಯೇ ಜಲಪಾತಗಳ ಗ್ರಾಮ ಎಂಬ ಖ್ಯಾತಿಗೆ ಪಾತ್ರವಾಗಿದೆ. ಪ್ರವಾಸಿಗರು ಬಹು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಿದ್ದಾರೆ.

ಭಾಗಮಂಡಲದಿಂದ ಕರಿಕೆಗೆ ಬರುವ ಹೆದ್ದಾರಿಯಲ್ಲಿ 30ಕ್ಕೂ ಅಧಿಕ ಜಲಪಾತಗಳು ಪ್ರವಾಸಿಗರನ್ನು ನಿಬ್ಬೆರಗಾಗಿಸುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಈ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಈ ದೃಶ್ಯಗಳನ್ನು ನೋಡಲು ಕರಿಕೆ ಗ್ರಾಮಕ್ಕೆ ನೂರಾರು ಪ್ರವಾಸಿಗರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಮೂವತ್ತಕ್ಕೂ ಅಧಿಕ ಜಲಪಾತಗಳು ಹೆದ್ದಾರಿಯ ಪಕ್ಕದಲ್ಲಿ ಕಾಣಸಿಗುವುದು ಇಲ್ಲಿಯ ವಿಶೇಷ.

30 ಕಿಲೋಮೀಟರ್ ದೂರದ ರಸ್ತೆಯಲ್ಲಿ ಪ್ರತಿ ಕಿಲೋಮೀಟರಿಗೂ ಒಂದಂತೆ ಜಲಪಾತಗಳು ಈ ಭಾಗದಲ್ಲಿ ಕಾಣಸಿಗುತ್ತದೆ. ಸುಳ್ಯದಿಂದ 30 ಕಿಲೋಮೀಟರ್ ದೂರದಲ್ಲಿದೆ ಇದು. ಮಡಿಕೇರಿಯಿಂದ 35 ಕಿಲೋಮೀಟರ್ ದೂರದಲ್ಲಿದೆ. ಇನ್ನೊಂದು ಕೇರಳದ ಮುಖಾಂತರವೂ ಈ ಭಾಗಕ್ಕೆ ನಾವು ಪ್ರವೇಶಿಸಬಹುದು. ಕಾಸರಗೋಡಿನಿಂದ ಪಾಣತ್ತೂರು ಭಾಗಕ್ಕೆ ನಾವು ಬಂದು ಕರಿಕೆ ತಲುಪಬಹುದು.

ಕರಿಕೆಯಿಂದ ಭಾಗಮಂಡಲ ರಸ್ತೆಯಲ್ಲಿ ಮಳೆಗಾಲದಲ್ಲಿ ಧುಮ್ಮಿಕ್ಕುವ ಈ ಜಲಪಾತಗಳು ಸ್ವರ್ಗವನ್ನೇ ಸೃಷ್ಟಿಸುತ್ತವೆ. ಮಾನ್ಸೂನ್ ಪ್ರವಾಸಕ್ಕೆ ಕರಿಕೆ ಹೇಳಿ ಮಾಡಿದ ಸ್ಥಳದಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು