2:16 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ

24/06/2022, 19:35

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com):
ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ‌ ಒಂದೊಂದು ಹಸುವನ್ನು ಕೊಂದಿದೆ.‌‌ ಎರಡೂ ಕಡೆಯೂ ಒಂದೇ ಹುಲಿ ದಾಳಿ ನಡೆಸಿದೆಯೆ ಅಥವಾ ಎರಡೂ ಬೇರೆ ಬೇರೆಯೆ ಎಂಬುದು ತಿಳಿದು ಬಂದಿಲ್ಲ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯ ಚಲನವಲನಗಳು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. 

ಘಟ್ಟದಳ ಸಮೀಪದ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಎಸ್ಟೇಟ್ ನಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಸಂಸ್ಥೆಯ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು. ಎಸ್ಟೇಟ್ ನ ತೋಟದ ಒಳಭಾಗದಲ್ಲಿ ಹಸುವೊಂದನ್ನು ಹುಲಿ ಬೇಟೆಯಾಡಿ ಕೊಂದಿದ್ದು, ಸಿ.ಸಿ.ಟಿ‌.ವಿ ಕ್ಯಾಮೆರಾದಲ್ಲಿ  ದೃಶ್ಯ ಸೆರೆಯಾಗಿದೆ. ದಷ್ಟಪುಷ್ಟವಾದ ಹುಲಿಯಾಗಿದ್ದು, 8 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಕೂಂಬಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. 

ಪಾಲಿಬೆಟ್ಟದಲ್ಲೂ ಆತಂಕ: ಬುಧವಾರ ರಾತ್ರಿ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿ ದಾಳಿ ನಡೆಸಿ  ಹಸುವೊಂದನ್ನು ಕೊಂದು ಹಾಕಿತ್ತು. ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿದೆ‌. ಶುಕ್ರವಾರ ಕ್ಯಾಮೆರಾದಲ್ಲಿ ಹುಲಿ ದೃಶ್ಯ ಸೆರೆಯಾಗಿಲ್ಲ. ಹುಲಿ ಇದೆ ಎಂಬ ಕಾರಣ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು