4:21 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ

24/06/2022, 19:35

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com):
ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ‌ ಒಂದೊಂದು ಹಸುವನ್ನು ಕೊಂದಿದೆ.‌‌ ಎರಡೂ ಕಡೆಯೂ ಒಂದೇ ಹುಲಿ ದಾಳಿ ನಡೆಸಿದೆಯೆ ಅಥವಾ ಎರಡೂ ಬೇರೆ ಬೇರೆಯೆ ಎಂಬುದು ತಿಳಿದು ಬಂದಿಲ್ಲ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯ ಚಲನವಲನಗಳು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. 

ಘಟ್ಟದಳ ಸಮೀಪದ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಎಸ್ಟೇಟ್ ನಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಸಂಸ್ಥೆಯ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು. ಎಸ್ಟೇಟ್ ನ ತೋಟದ ಒಳಭಾಗದಲ್ಲಿ ಹಸುವೊಂದನ್ನು ಹುಲಿ ಬೇಟೆಯಾಡಿ ಕೊಂದಿದ್ದು, ಸಿ.ಸಿ.ಟಿ‌.ವಿ ಕ್ಯಾಮೆರಾದಲ್ಲಿ  ದೃಶ್ಯ ಸೆರೆಯಾಗಿದೆ. ದಷ್ಟಪುಷ್ಟವಾದ ಹುಲಿಯಾಗಿದ್ದು, 8 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಕೂಂಬಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. 

ಪಾಲಿಬೆಟ್ಟದಲ್ಲೂ ಆತಂಕ: ಬುಧವಾರ ರಾತ್ರಿ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿ ದಾಳಿ ನಡೆಸಿ  ಹಸುವೊಂದನ್ನು ಕೊಂದು ಹಾಕಿತ್ತು. ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿದೆ‌. ಶುಕ್ರವಾರ ಕ್ಯಾಮೆರಾದಲ್ಲಿ ಹುಲಿ ದೃಶ್ಯ ಸೆರೆಯಾಗಿಲ್ಲ. ಹುಲಿ ಇದೆ ಎಂಬ ಕಾರಣ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು