7:08 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ

24/06/2022, 19:35

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com):
ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ‌ ಒಂದೊಂದು ಹಸುವನ್ನು ಕೊಂದಿದೆ.‌‌ ಎರಡೂ ಕಡೆಯೂ ಒಂದೇ ಹುಲಿ ದಾಳಿ ನಡೆಸಿದೆಯೆ ಅಥವಾ ಎರಡೂ ಬೇರೆ ಬೇರೆಯೆ ಎಂಬುದು ತಿಳಿದು ಬಂದಿಲ್ಲ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯ ಚಲನವಲನಗಳು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. 

ಘಟ್ಟದಳ ಸಮೀಪದ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಎಸ್ಟೇಟ್ ನಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಸಂಸ್ಥೆಯ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು. ಎಸ್ಟೇಟ್ ನ ತೋಟದ ಒಳಭಾಗದಲ್ಲಿ ಹಸುವೊಂದನ್ನು ಹುಲಿ ಬೇಟೆಯಾಡಿ ಕೊಂದಿದ್ದು, ಸಿ.ಸಿ.ಟಿ‌.ವಿ ಕ್ಯಾಮೆರಾದಲ್ಲಿ  ದೃಶ್ಯ ಸೆರೆಯಾಗಿದೆ. ದಷ್ಟಪುಷ್ಟವಾದ ಹುಲಿಯಾಗಿದ್ದು, 8 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಕೂಂಬಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. 

ಪಾಲಿಬೆಟ್ಟದಲ್ಲೂ ಆತಂಕ: ಬುಧವಾರ ರಾತ್ರಿ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿ ದಾಳಿ ನಡೆಸಿ  ಹಸುವೊಂದನ್ನು ಕೊಂದು ಹಾಕಿತ್ತು. ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿದೆ‌. ಶುಕ್ರವಾರ ಕ್ಯಾಮೆರಾದಲ್ಲಿ ಹುಲಿ ದೃಶ್ಯ ಸೆರೆಯಾಗಿಲ್ಲ. ಹುಲಿ ಇದೆ ಎಂಬ ಕಾರಣ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು