5:23 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಲಂಡನಿನ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಅರುಣ್ ಮಾಚಯ್ಯ ಆಯ್ಕೆ

25/06/2022, 09:13

ಮಡಿಕೇರಿ(reporterkarnataka.com):
ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ಮುಂದಿನ ಸೆಪ್ಟೆಂಬರ್ 26ರಿಂದ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ.

ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರು, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರು ಹಾಗೂ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಸಮಾರಂಭದಲ್ಲಿ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.

ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿದ ಸಂದರ್ಭದಲ್ಲಿ ಕರಾಟೆ ಇಂಡಿಯಾ ಆರ್ಗನೈಸೇಶನ್ ಅಧ್ಯಕ್ಷರಾದ ಸಂಜೀವ್ ಕುಮಾರ್ ಜಾಗ್ರ, ವಿಶ್ವ ಕರಾಟೆ ಮಂಡಳಿಯ ತಾಂತ್ರಿಕ ಆಯೋಗದ ಸದಸ್ಯ ಭರತ್ ಶರ್ಮ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಸಲಾಹುದ್ದೀನ್ ಅನ್ಸಾರಿ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಕಾರ್ಯದರ್ಶಿ ಸಂದೀಪ್ ಘಾಡೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು