2:17 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶ

25/06/2022, 09:21

ಮೈಸೂರು(reporterkarnataka.com): ಗುಂಡ್ಲುಪೇಟೆ ಸಮೀಪ ನಕಲಿ ರಸಗೊಬ್ಬರ ಹಾಗೂ ಔಷಧ  ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ.ಹಿರೀಕಾಟಿ ಗ್ರಾಮದ ಖಾಸಗಿ ಜಮೀನಿನಲ್ಲಿ ತಯಾರಿಸುತ್ತಿದ್ದ ನಕಲಿ ರಸಗೊಬ್ಬರ ಮತ್ತು ಕೃಷಿ ಔಷಧ ಬಗ್ಗೆ ನಿಖರ ಮಾಹಿತಿ ಪಡೆದ ನಂಜನಗೂಡು ಹಾಗೂ ಮೈಸೂರಿನ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ

ನಡೆದ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿಗಳು ಹಾಗೂ ಮಾಲೀಕ ಪರಾರಿಯಾಗಿದ್ದಾರೆ. ನೂರಾರು ಟನ್ ಗಳ ನಕಲಿ ರಸಗೊಬ್ಬರ, ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜು ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಿ ಹೆಸರಾಂತ ಕಂಪನಿಯ ಬ್ಯಾಗ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ನಕಲಿ ಗೊಬ್ಬರ ಸರಬರಾಜಾಗುತ್ತಿದ್ದು ಅಮಾಯಕ ರೈತರು ವಂಚನೆಗೆ ಒಳಗಾಗುತ್ತಿದ್ದ ದೂರುಗಳು ಕೃಷಿ ಇಲಾಖೆಗೆ ಬಂದಿತ್ತು.ಈ ಹಿನ್ನಲೆ ಕಾರ್ಯೋನ್ಮುಖರಾದ ನಂಜನಗೂಡು ಹಾಗೂ ಮೈಸೂರು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ

ಕಾರ್ಯಾಚರಣೆ ನಡೆಸಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಖದೀಮರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಮೈಸೂರಿನ ಕೃಷಿ ಇಲಾಖೆಯ ಉಪನಿರ್ದೇಶಕ

ರಾಜು ಹಾಗೂ ನಂಜನಗೂಡು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು