10:18 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ವೀರಾಜಪೇಟೆ: ಅನ್ನ ನೀಡಿದ ಸಂಸ್ಥೆಗೆ ಕನ್ನ;  1 ಲಕ್ಷ ರೂ. ದೋಚಿದ ಇಬ್ಬರು ಡೆಲಿವರಿ ಬಾಯ್ ಗಳ ಬಂಧನ

25/06/2022, 12:18

ಮಡಿಕೇರಿ(reporterkarnataka.com):  ಅನ್ನ ನೀಡಿದ ಸಂಸ್ಥೆಗೆ ಕನ್ನ ಹಾಕಲು ಹೋಗಿ ಇಬ್ಬರು ಆರೋಪಿಗಳು ಪೊಲೀಸ್ ಅತಿಥಿಯಾದ ಘಟನೆ ವೀರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿ ನಡೆದಿದೆ.

ವೆಬ್ ಸಿರೀಸ್ ನಲ್ಲಿ ಬರುವ ಸೀರಿಯಲ್ ಗಳನ್ನು ವೀಕ್ಷಿಸಿ ಅದೇ ತಂತ್ರವನ್ನು ಬಳಸಿ ನಗದು ಕಳ್ಳತನ ಮಾಡಲು ಹೊರಟು ವೀರಾಜಪೇಟೆ ತಾಲೂಕು ಬೇಟೋಳಿ ಗ್ರಾಮದ ಹೆಗ್ಗಳ ನಿರ್ಮಲಗಿರಿ ಗ್ರಾಮದ ನಿವಾಸಿ ಎಸ್. ಸಿವಿನ್  (೨೦)  ಮತ್ತು ಸೆಬಾಸ್ಟೀನ್ ಡಿಸೋಜಾ (೨೦) ಬಂಧನಕ್ಕೀಡಾಗಿದ್ದಾರೆ.

ಘಟನೆಯ ವಿವರ: ವಿರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿರುವ ಇನ್ಪಾಕಾರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ 12ರಂದು ರಾತ್ರಿ ನಗದು ಕಳ್ಳತನ ನಡೆದಿತ್ತು. ಬಂಧಿತ ಇಬ್ಬರು ಆರೋಪಿಗಳು  ಬಡ ಕುಟುಂಬದಿಂದ ಬಂದಿರುವರಾಗಿದ್ದಾರೆ. ಕೆಲಸ ಅರಿಸಿಕೊಂಡಿರುವ ವೇಳೆಯಲ್ಲಿ ಸಂಸ್ಥೆಯಲ್ಲಿ ಡೆಲೆವರಿ ಬಾಯ್ ಗಳಾಗಿ ಕೆಲಸಕ್ಕೆ ಸೇರಿಕೊಂಡಿದ್ದರು.

ಮೊದಲಿಗೆ ಪ್ರಕರಣದ ಎರಡನೇ ಆರೋಪಿಯಾಗಿರುವ ಸೆಬಾಸ್ಟೀನ್ ಕೆಲಸ ಗಿಟ್ಟಿಸಿಕೊಳ್ಳುತ್ತಾನೆ. ನಂತರ ಸ್ನೇಹಿತನಾದ ಸಿವಿನ್ ಕೆಲಸಕ್ಕೆ ಸೇರ್ಪಡೆಯಾಗುತ್ತಾನೆ. ಒಂದೇ ಊರಿನವರಾದ ಇರ್ವರು ಸೇವೆಯಲ್ಲಿ ಮುಂದುವರೆಯುತ್ತಾರೆ. ಸಿವಿನ್ ಗೆ ಮೋಬೈಲ್ ನಲ್ಲಿ ಬರುವ  ಮನಿ ಹ್ಯಾಕ್ ವೆಬ್ ಸಿರೀಸ್ ನೋಡುವ ಹುಚ್ಚು ತೆಲೆಗೇರುತ್ತದೆ. ಸಿರೀಸ್ ನಿಂದ ಪ್ರಭಾವಿತನಾದ ಸಿವಿನ್ ತನ್ನ ಮಿತ್ರನಿಗೂ ತಿಳಿಸಿಕೊಡುತ್ತಾನೆ. ನಂತರದಲ್ಲಿ ಫ್ರೀ ಪ್ಲೇನ್ ಸಿದ್ದವಾಗುತ್ತದೆ. ದಿನ ನಿತ್ಯ ಸಂಸ್ಥೆಗೆ ಲಕ್ಷದ ವ್ಯವಹಾರ ನಡೆಯುತ್ತಿದೆ. ಹೇಗಾದರು ಮಾಡಿ ಹಣ ಲಪಾಟಯಿಸಬೇಕು ಎಂದು ಇರ್ವರ ಪ್ಲಾನ್ ಹಾಕುತ್ತಾರೆ. ಅದರಂತೆ ಸಂಸ್ಥೆಗೆ ಸೇರಿದ ಸುಮಾರು 1 ಲಕ್ಷ ರೂ. ಲಪಟಾಯಿಸಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು