2:02 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ವೀರಾಜಪೇಟೆ: ಅನ್ನ ನೀಡಿದ ಸಂಸ್ಥೆಗೆ ಕನ್ನ;  1 ಲಕ್ಷ ರೂ. ದೋಚಿದ ಇಬ್ಬರು ಡೆಲಿವರಿ ಬಾಯ್ ಗಳ ಬಂಧನ

25/06/2022, 12:18

ಮಡಿಕೇರಿ(reporterkarnataka.com):  ಅನ್ನ ನೀಡಿದ ಸಂಸ್ಥೆಗೆ ಕನ್ನ ಹಾಕಲು ಹೋಗಿ ಇಬ್ಬರು ಆರೋಪಿಗಳು ಪೊಲೀಸ್ ಅತಿಥಿಯಾದ ಘಟನೆ ವೀರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿ ನಡೆದಿದೆ.

ವೆಬ್ ಸಿರೀಸ್ ನಲ್ಲಿ ಬರುವ ಸೀರಿಯಲ್ ಗಳನ್ನು ವೀಕ್ಷಿಸಿ ಅದೇ ತಂತ್ರವನ್ನು ಬಳಸಿ ನಗದು ಕಳ್ಳತನ ಮಾಡಲು ಹೊರಟು ವೀರಾಜಪೇಟೆ ತಾಲೂಕು ಬೇಟೋಳಿ ಗ್ರಾಮದ ಹೆಗ್ಗಳ ನಿರ್ಮಲಗಿರಿ ಗ್ರಾಮದ ನಿವಾಸಿ ಎಸ್. ಸಿವಿನ್  (೨೦)  ಮತ್ತು ಸೆಬಾಸ್ಟೀನ್ ಡಿಸೋಜಾ (೨೦) ಬಂಧನಕ್ಕೀಡಾಗಿದ್ದಾರೆ.

ಘಟನೆಯ ವಿವರ: ವಿರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿರುವ ಇನ್ಪಾಕಾರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ 12ರಂದು ರಾತ್ರಿ ನಗದು ಕಳ್ಳತನ ನಡೆದಿತ್ತು. ಬಂಧಿತ ಇಬ್ಬರು ಆರೋಪಿಗಳು  ಬಡ ಕುಟುಂಬದಿಂದ ಬಂದಿರುವರಾಗಿದ್ದಾರೆ. ಕೆಲಸ ಅರಿಸಿಕೊಂಡಿರುವ ವೇಳೆಯಲ್ಲಿ ಸಂಸ್ಥೆಯಲ್ಲಿ ಡೆಲೆವರಿ ಬಾಯ್ ಗಳಾಗಿ ಕೆಲಸಕ್ಕೆ ಸೇರಿಕೊಂಡಿದ್ದರು.

ಮೊದಲಿಗೆ ಪ್ರಕರಣದ ಎರಡನೇ ಆರೋಪಿಯಾಗಿರುವ ಸೆಬಾಸ್ಟೀನ್ ಕೆಲಸ ಗಿಟ್ಟಿಸಿಕೊಳ್ಳುತ್ತಾನೆ. ನಂತರ ಸ್ನೇಹಿತನಾದ ಸಿವಿನ್ ಕೆಲಸಕ್ಕೆ ಸೇರ್ಪಡೆಯಾಗುತ್ತಾನೆ. ಒಂದೇ ಊರಿನವರಾದ ಇರ್ವರು ಸೇವೆಯಲ್ಲಿ ಮುಂದುವರೆಯುತ್ತಾರೆ. ಸಿವಿನ್ ಗೆ ಮೋಬೈಲ್ ನಲ್ಲಿ ಬರುವ  ಮನಿ ಹ್ಯಾಕ್ ವೆಬ್ ಸಿರೀಸ್ ನೋಡುವ ಹುಚ್ಚು ತೆಲೆಗೇರುತ್ತದೆ. ಸಿರೀಸ್ ನಿಂದ ಪ್ರಭಾವಿತನಾದ ಸಿವಿನ್ ತನ್ನ ಮಿತ್ರನಿಗೂ ತಿಳಿಸಿಕೊಡುತ್ತಾನೆ. ನಂತರದಲ್ಲಿ ಫ್ರೀ ಪ್ಲೇನ್ ಸಿದ್ದವಾಗುತ್ತದೆ. ದಿನ ನಿತ್ಯ ಸಂಸ್ಥೆಗೆ ಲಕ್ಷದ ವ್ಯವಹಾರ ನಡೆಯುತ್ತಿದೆ. ಹೇಗಾದರು ಮಾಡಿ ಹಣ ಲಪಾಟಯಿಸಬೇಕು ಎಂದು ಇರ್ವರ ಪ್ಲಾನ್ ಹಾಕುತ್ತಾರೆ. ಅದರಂತೆ ಸಂಸ್ಥೆಗೆ ಸೇರಿದ ಸುಮಾರು 1 ಲಕ್ಷ ರೂ. ಲಪಟಾಯಿಸಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು