5:21 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ, ಕರಾವಳಿಯಲ್ಲಿ ತೋಟಕ್ಕೆ ನುಗ್ಗಿದ ನೀರು

19/06/2021, 15:00

ಬೆಳಗಾವಿ/ಮಂಗಳೂರು/ಹಾಸನ/ದಾವಣಗೆರೆ(reporterkarnataka news):  ರಾಜ್ಯದ ಬಹುತೇಕ ಕಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹದ ಭೀತಿ ಎದುರಾದರೆ, ಇನ್ನೊಂದೆಡೆ ಭೂ ಕುಸಿತ ಉಂಟಾಗುತ್ತಿದೆ. ಭಾರಿ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. 


ಸತತ ಮಳೆಗೆ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕರಾವಳಿ ಜಿಲ್ಲೆಗಳಲ್ಲಿ ಕೃಷಿಭೂಮಿ, ಗದ್ದೆ, ತೋಟಗಳಿಗೆ ನೆರೆ ನೀರು ನುಗ್ಗಿದೆ. ಕೆಲವು ಕಡೆಗಳಲ್ಲಿ ಮನೆಗಳಿಗೂ ನೀರು ನುಗ್ಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ ಸಮೀಪದ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ರಸ್ತೆ ಕುಸಿತವುಂಟಾಗಿದ್ದು, ರಾಣೆಬೆನ್ನೂರು ಮಾರ್ಗದಿಂದ ಶಿಕಾರಿಪುರ, ಹೊಸನಗರ, ಬೈಂದೂರು ಮಾರ್ಗದ ಮೂಲಕ ಹೋಗುವ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಹೊಸನಗರ, ಮಾಸ್ತಿಕಟ್ಟೆ, ಸಿದ್ದಾಪುರ ಮಾರ್ಗವಾಗಿ ವಾಹನ ಸಂಚಾರಕ್ಕೆ ಸೂಚಿಸಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರೇಮನಗರದಲ್ಲಿ ಭಾರಿ ಮಳೆಗೆ ತಡೆಗೋಡೆ ಸಮೇತ ರಸ್ತೆ ಕುಸಿದಿದೆ. ಇಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯವಸ್ತವಾಗಿದೆ. ರಸ್ತೆಯ ಒಂದು ಭಾಗ ಸಂಪೂರ್ಣ ಕುಸಿದಿದೆ. ಇದರಿಂದಾಗಿ ಸುತ್ತಮುತ್ತಲಿನ ಹತ್ತಾರು ಮನೆಗಳಿಗೂ ಆತಂಕ ಎದುರಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ  ಜಿಲ್ಲೆಗಳಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಘಟಪ್ರಭಾ, ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿಯ ಚಿಕ್ಕೋಡಿಯ ವಿಭಾಗದ 7 ಸೇತುವೆಗಳು ಜಲಾವೃತಗೊಂಡಿವೆ. ಕಲ್ಲೋಳ ಗ್ರಾಮದ ದತ್ತ ದೇವಾಲಯ, ಬಂಗಾಲಿ ಬಾಬಾ ದೇವಸ್ಥಾನಗಳು ಜಲಾವೃತಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು