3:35 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ, ಕರಾವಳಿಯಲ್ಲಿ ತೋಟಕ್ಕೆ ನುಗ್ಗಿದ ನೀರು

19/06/2021, 15:00

ಬೆಳಗಾವಿ/ಮಂಗಳೂರು/ಹಾಸನ/ದಾವಣಗೆರೆ(reporterkarnataka news):  ರಾಜ್ಯದ ಬಹುತೇಕ ಕಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹದ ಭೀತಿ ಎದುರಾದರೆ, ಇನ್ನೊಂದೆಡೆ ಭೂ ಕುಸಿತ ಉಂಟಾಗುತ್ತಿದೆ. ಭಾರಿ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. 


ಸತತ ಮಳೆಗೆ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕರಾವಳಿ ಜಿಲ್ಲೆಗಳಲ್ಲಿ ಕೃಷಿಭೂಮಿ, ಗದ್ದೆ, ತೋಟಗಳಿಗೆ ನೆರೆ ನೀರು ನುಗ್ಗಿದೆ. ಕೆಲವು ಕಡೆಗಳಲ್ಲಿ ಮನೆಗಳಿಗೂ ನೀರು ನುಗ್ಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ ಸಮೀಪದ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ರಸ್ತೆ ಕುಸಿತವುಂಟಾಗಿದ್ದು, ರಾಣೆಬೆನ್ನೂರು ಮಾರ್ಗದಿಂದ ಶಿಕಾರಿಪುರ, ಹೊಸನಗರ, ಬೈಂದೂರು ಮಾರ್ಗದ ಮೂಲಕ ಹೋಗುವ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಹೊಸನಗರ, ಮಾಸ್ತಿಕಟ್ಟೆ, ಸಿದ್ದಾಪುರ ಮಾರ್ಗವಾಗಿ ವಾಹನ ಸಂಚಾರಕ್ಕೆ ಸೂಚಿಸಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರೇಮನಗರದಲ್ಲಿ ಭಾರಿ ಮಳೆಗೆ ತಡೆಗೋಡೆ ಸಮೇತ ರಸ್ತೆ ಕುಸಿದಿದೆ. ಇಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯವಸ್ತವಾಗಿದೆ. ರಸ್ತೆಯ ಒಂದು ಭಾಗ ಸಂಪೂರ್ಣ ಕುಸಿದಿದೆ. ಇದರಿಂದಾಗಿ ಸುತ್ತಮುತ್ತಲಿನ ಹತ್ತಾರು ಮನೆಗಳಿಗೂ ಆತಂಕ ಎದುರಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ  ಜಿಲ್ಲೆಗಳಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಘಟಪ್ರಭಾ, ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿಯ ಚಿಕ್ಕೋಡಿಯ ವಿಭಾಗದ 7 ಸೇತುವೆಗಳು ಜಲಾವೃತಗೊಂಡಿವೆ. ಕಲ್ಲೋಳ ಗ್ರಾಮದ ದತ್ತ ದೇವಾಲಯ, ಬಂಗಾಲಿ ಬಾಬಾ ದೇವಸ್ಥಾನಗಳು ಜಲಾವೃತಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು