9:55 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಹರಿದ್ವಾರದಲ್ಲಿ ಪೇಜಾವರ ಶ್ರೀ ಹಾಗೂ ಕಾಶೀ ಮಠಾಧೀಶರ ಸಮಾಗಮ: ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ

26/06/2022, 16:40

ಹರಿದ್ವಾರ(reporterkarnataka.com): ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ  ಹಾಗೂ ಕಾಶೀ ಮಠಾಧೀಶರಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಹರಿದ್ವಾರದಲ್ಲಿ ಭೇಟಿಯಾದರು.

ಉಡುಪಿಯ ಶ್ರೀ ಸಂಸ್ಥಾನ ಪೇಜಾವರದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿರುವ ಶ್ರೀ ವ್ಯಾಸ ಆಶ್ರಮದಲ್ಲಿರುವ ಶ್ರೀ ವ್ಯಾಸ ಮಂದಿರದಲ್ಲಿ ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನ ಭೇಟಿ ಬಳಿಕ ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ ನಡೆಸಿದರು.

ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಪೇಜಾವರ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿ ಸ್ವಾಗತಿಸಿದರು. ಪರಸ್ಪರ ಯತಿಗಳವರು ಪುಷ್ಪ ಮಾಲಾರ್ಪಣೆ ಮೂಲಕ ಅಭಿನಂದಿಸಿದರು . 

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಮಾತನಾಡುತ್ತಾ ಶ್ರೀಗಳವರ ಬಾಂಧವ್ಯ , ಸ್ನೇಹ ಕಂಡು ತುಂಬಾ ಸಂತೋಷವಾಯಿತು. ನಮ್ಮೆಲ್ಲರಿಗೂ ಮೂಲಗುರುಗಳಾದ ಮಧ್ವಾಚಾರ್ಯರಿಗೆ ಸ್ಮರಿಸುತ್ತಾ  ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರಿಗೆ ಶ್ರೀ ಗಳವರು  ಸಂಸ್ಥಾನ ಹಾಗೂ ಭಕ್ತಜನರು ಸಮರ್ಪಿಸಿದನ್ನು ಸಂತೋಷದಿಂದ ಸ್ವೀಕರಿಸಲಾಗಿದೆ. ತಮ್ಮ ಗುರುಗಳಾದ ವೃನ್ದಾವನಸ್ಥ ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥರು ಹರಿದ್ವಾರಕ್ಕೆ ಬಂದ ಸಂದರ್ಭದಲ್ಲಿ ವ್ಯಾಸಾಶ್ರಮದಲ್ಲಿರುವ ವ್ಯಾಸ ಘಾಟಿಗೆ ಬಂದು ಪುಣ್ಯ ಗಂಗಾ ಸ್ನಾನ , ಶ್ರೀ ದೇವರಿಗೆ ಪೂಜಾ ಪುರಸ್ಕಾರ ನಡೆಸುತ್ತಿದ್ದರು ಎಂದು ಸ್ಮರಿಸಿಕೊಂಡರು. 

ಈ ಸಂದರ್ಭದಲ್ಲಿ ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರರಾದ ಜಗನ್ನಾಥ್ ಶೆಣೈ , ಜಿಎಸ್ ಬಿ ಸೇವಾಮಂಡಳದ ಆರ್ . ಜಿ . ಭಟ್ , ದೆಹಲಿ ಜಿ ಎಸ್ ಬಿ ಸಮಾಜದ ಪ್ರಕಾಶ್ ಪೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು