9:30 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಹರಿದ್ವಾರದಲ್ಲಿ ಪೇಜಾವರ ಶ್ರೀ ಹಾಗೂ ಕಾಶೀ ಮಠಾಧೀಶರ ಸಮಾಗಮ: ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ

26/06/2022, 16:40

ಹರಿದ್ವಾರ(reporterkarnataka.com): ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ  ಹಾಗೂ ಕಾಶೀ ಮಠಾಧೀಶರಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಹರಿದ್ವಾರದಲ್ಲಿ ಭೇಟಿಯಾದರು.

ಉಡುಪಿಯ ಶ್ರೀ ಸಂಸ್ಥಾನ ಪೇಜಾವರದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿರುವ ಶ್ರೀ ವ್ಯಾಸ ಆಶ್ರಮದಲ್ಲಿರುವ ಶ್ರೀ ವ್ಯಾಸ ಮಂದಿರದಲ್ಲಿ ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನ ಭೇಟಿ ಬಳಿಕ ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ ನಡೆಸಿದರು.

ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಪೇಜಾವರ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿ ಸ್ವಾಗತಿಸಿದರು. ಪರಸ್ಪರ ಯತಿಗಳವರು ಪುಷ್ಪ ಮಾಲಾರ್ಪಣೆ ಮೂಲಕ ಅಭಿನಂದಿಸಿದರು . 

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಮಾತನಾಡುತ್ತಾ ಶ್ರೀಗಳವರ ಬಾಂಧವ್ಯ , ಸ್ನೇಹ ಕಂಡು ತುಂಬಾ ಸಂತೋಷವಾಯಿತು. ನಮ್ಮೆಲ್ಲರಿಗೂ ಮೂಲಗುರುಗಳಾದ ಮಧ್ವಾಚಾರ್ಯರಿಗೆ ಸ್ಮರಿಸುತ್ತಾ  ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರಿಗೆ ಶ್ರೀ ಗಳವರು  ಸಂಸ್ಥಾನ ಹಾಗೂ ಭಕ್ತಜನರು ಸಮರ್ಪಿಸಿದನ್ನು ಸಂತೋಷದಿಂದ ಸ್ವೀಕರಿಸಲಾಗಿದೆ. ತಮ್ಮ ಗುರುಗಳಾದ ವೃನ್ದಾವನಸ್ಥ ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥರು ಹರಿದ್ವಾರಕ್ಕೆ ಬಂದ ಸಂದರ್ಭದಲ್ಲಿ ವ್ಯಾಸಾಶ್ರಮದಲ್ಲಿರುವ ವ್ಯಾಸ ಘಾಟಿಗೆ ಬಂದು ಪುಣ್ಯ ಗಂಗಾ ಸ್ನಾನ , ಶ್ರೀ ದೇವರಿಗೆ ಪೂಜಾ ಪುರಸ್ಕಾರ ನಡೆಸುತ್ತಿದ್ದರು ಎಂದು ಸ್ಮರಿಸಿಕೊಂಡರು. 

ಈ ಸಂದರ್ಭದಲ್ಲಿ ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರರಾದ ಜಗನ್ನಾಥ್ ಶೆಣೈ , ಜಿಎಸ್ ಬಿ ಸೇವಾಮಂಡಳದ ಆರ್ . ಜಿ . ಭಟ್ , ದೆಹಲಿ ಜಿ ಎಸ್ ಬಿ ಸಮಾಜದ ಪ್ರಕಾಶ್ ಪೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು