9:21 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡ್ರಗ್ಸ್  ಜಾಗೃತಿಗಾಗಿ 15 ಕಿಮೀ ಓಡಿದ  ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ

26/06/2022, 21:48

ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು.


ವಿನೋಬಾ ನಗರ ಪೊಲೀಸ್ ಚೌಕಿಯಿಂದ- ಉಷಾ ನರ್ಸಿಂಗ್ ಹೋಂ- ನೆಹರೂ ಕ್ರೀಡಾಂಗಣ- ಮಹಾವೀರ ವೃತ್ತ- ಕೆಇಬಿ ವೃತ್ತ-ಸಂಗೊಳ್ಳಿ ರಾಯಣ್ಣ ವೃತ್ತ- ಶಂಕರ್ ಮಠ ವೃತ್ತ- ಬಿ ಹೆಚ್ ರಸ್ತೆ- ಶಿವಪ್ಪ ವೃತ್ತ- ಅಮೀರ್ ಅಮ ವೃತ್ತ- ಕೆ ಎಸ್ ಆರ್ ಟಿಸಿ ಬಸ್ ಸ್ಟಾಂಡ್- ಎಸ್ಪಿ ಕಚೇರಿ- ಮೆಗ್ಗಾನ್ ಆಸ್ಪತ್ರೆ- ಮಾನಸ ನರ್ಸಿಂಗ್ ಹೋಂ- ಜೈಲ್ ರೋಡ್- ಗೋಪಿ ವೃತ್ತ- ಗಾಂಧಿ ಪಾರ್ಕ್-ಎಪಿಎಂಸಿ- ಅಲ್ಕೊಳ ವೃತ್ತ- ಕಾಶೀಪುರವರೆಗೂ ಮ್ಯಾರಥಾನ್ ನಡೆಸಿದರು ನಂತರ “ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವ್ಯಾಪಕವಾಗಿರುವ ಡ್ರಗ್ಸ್ ದೇಹಕ್ಕೆ, ಆರೋಗ್ಯಕ್ಕೆ ಮಾರಕ ದೇಶವನ್ನೇ ಡ್ರಗ್ಸ್ ನಿಂದ ನಿರ್ಮೂಲನೆ ಮಾಡಬೇಕೆಂದು ಹೇಳುವುದಕ್ಕಿಂತ ತಮ್ಮ ತಮ್ಮ ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸುವಂತೆ” ಕರೆ ನೀಡಿದರು, 

ಜಾಗೃತಿ ಓಟದ ಸಂಪೂರ್ಣ ಯಶಸ್ಸನ್ನು ಸುಪ್ರೀಂ ಕೋರ್ಟಿನ ಎಎಸ್ಜಿ ಕೆ.ಎಂ.ನಟರಾಜ್ ಅವರಿಗೆ ಸಮರ್ಪಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು