3:50 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾಗರಿಕರ ಎಲ್ಲ ಹಕ್ಕು ಕಸಿಯಲಾಯಿತು: ‘ಮನ್ ಕಿ ಬಾತ್’ನಲ್ಲಿ  ಪ್ರಧಾನಿ ಮೋದಿ

27/06/2022, 00:09

ಹೊಸದಿಲ್ಲಿ(reporterkarnataka.com): ದೇಶದ ಮೇಲೆ 1975ರಲ್ಲಿ ಹೇರಲಾದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಹತ್ತಿಕ್ಕುವ 

ಪ್ರಯತ್ನ ನಡೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತದ ಇತಿಹಾಸದ ಕರಾಳ ಅಧ್ಯಾಯವಾದ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮಾಸಿಕ ಮನ್ ಕಿ ಬಾತ್ ಭಾಷಣವನ್ನು ಪ್ರಾರಂಭಿಸಿದರು. ತುರ್ತುಪರಿಸ್ಥಿತಿಯನ್ನ ವಿರೋಧಿಸಿದ ಎಲ್ಲರನ್ನೂ ಶ್ಲಾಘಿಸಿದ ಪ್ರಧಾನಿ, ನಮ್ಮ ಪ್ರಜಾಸತ್ತಾತ್ಮಕ ಮನಸ್ಥಿತಿಯೇ ಅಂತಿಮವಾಗಿ ಮೇಲುಗೈ ಸಾಧಿಸಿತು ಎಂದರು.

ತಮ್ಮ ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ ಅಂದಿನ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ಹೇರಿದ ತುರ್ತು ಪರಿಸ್ಥಿತಿಯನ್ನ ನೆನಪಿಸಿಕೊಂಡ ಮೋದಿ, ಆ ಸಮಯದಲ್ಲಿ ಎಲ್ಲಾ ಹಕ್ಕುಗಳನ್ನ ಕಸಿದುಕೊಳ್ಳಲಾಯಿತು ಎಂದು ಹೇಳಿದರು. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು 1977ರ ಮಾರ್ಚ್ 21ರಂದು ಅದನ್ನು ತೆಗೆದುಹಾಕಲಾಯಿತು.

‘ಇಂದು, ದೇಶವು ಸ್ವಾತಂತ್ರ್ಯದ 75ನೇ ವರ್ಷವನ್ನ ಆಚರಿಸುತ್ತಿರುವಾಗ, ತುರ್ತು ಪರಿಸ್ಥಿತಿಯ ಕರಾಳ ಅವಧಿಯನ್ನು ನಾವು ಮರೆಯಬಾರದು. ಅಮೃತ ಮಹೋತ್ಸವವು ವಿದೇಶಿ ಆಳ್ವಿಕೆಯಿಂದ ಸ್ವಾತಂತ್ರ್ಯದ ಕಥೆಗಳನ್ನ ಹೇಳುವುದಲ್ಲದೇ ಸ್ವಾತಂತ್ರ್ಯದ 75 ವರ್ಷಗಳ ಪ್ರಯಾಣವನ್ನ ಸಹ ನಮಗೆ ತಿಳಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‘ನಾನು ದೇಶದ ಯುವಕರಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ, ನಿಮ್ಮ ಹೆತ್ತವರು ಒಮ್ಮೆ ನಿಮ್ಮ ವಯಸ್ಸಿನವರಾಗಿದ್ದಾಗ, ಅವರ ಬದುಕುವ ಹಕ್ಕನ್ನ ಸಹ ಕಸಿದುಕೊಳ್ಳಲಾಯಿತು ಎಂದು ನಿಮಗೆ ತಿಳಿದಿದೆಯೇ? ತುರ್ತು ಪರಿಸ್ಥಿತಿ ಹೇರಿದ 1975ರ ಜೂನ್ ತಿಂಗಳಲ್ಲಿ ಇದು ಸಂಭವಿಸಿತ್ತು’ ಎಂದು ಪ್ರಧಾನಿ ಹೇಳಿದರು.

‘ಆ ಅವಧಿಯಲ್ಲಿ, ನಾಗರಿಕರ ಎಲ್ಲಾ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ಈ ಹಕ್ಕುಗಳಲ್ಲಿ ಸಂವಿಧಾನದ ಅನುಚ್ಛೇದ 21ರ ಅಡಿಯಲ್ಲಿ ಖಾತರಿಪಡಿಸಲಾದ ನಾಗರಿಕರಿಗೆ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವೂ ಒಂದು. ಆ ಸಮಯದಲ್ಲಿ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದವು’ ಎಂದು ಅವರು ಹೇಳಿದರು.

‘ದೇಶದ ನ್ಯಾಯಾಲಯಗಳು, ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆ, ಪತ್ರಿಕೆಗಳು ಎಲ್ಲವನ್ನೂ ನಿಯಂತ್ರಣಕ್ಕೆ ತಂದವು. ಸೆನ್ಸಾರ್ಶಿಪ್ ಎಷ್ಟು ಕಟ್ಟುನಿಟ್ಟಾಗಿತ್ತೆಂದರೆ, ಅನುಮತಿಯಿಲ್ಲದೆ ಏನನ್ನೂ ಪ್ರಕಟಿಸಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಹೇಳಿದರು.

‘ನನಗೆ ನೆನಪಿದೆ, ಪ್ರಸಿದ್ಧ ಗಾಯಕ ಕಿಶೋರ್ ಕುಮಾರ್ ಅವರು ಸರ್ಕಾರವನ್ನ ಹೊಗಳಲು ನಿರಾಕರಿಸಿದಾಗ, ಅವರನ್ನ ನಿಷೇಧಿಸಲಾಯಿತು. ರೇಡಿಯೋದಲ್ಲಿ ಅವರಿಗೆ ಅವಕಾಶ ನೀಡಲಿಲ್ಲ’ ಎಂದು ಪ್ರಧಾನಿ ಹೇಳಿದರು. ಹಲವಾರು ಪ್ರಯತ್ನಗಳು, ಸಾವಿರಾರು ಬಂಧನಗಳು ಮತ್ತು ಲಕ್ಷಾಂತರ ಜನರ ಮೇಲಿನ ದೌರ್ಜನ್ಯಗಳ ಹೊರತಾಗಿಯೂ, ಪ್ರಜಾಪ್ರಭುತ್ವದಲ್ಲಿ ಭಾರತೀಯರ ನಂಬಿಕೆಯನ್ನ ಅಲುಗಾಡಿಸಲು ಸಾಧ್ಯವಾಗಲಿಲ್ಲ ಎಂದು ಪ್ರತಿಪಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು